Rampur Public Fund Festival Committee completes 58 years

ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ರಾಂಪುರ ಸಾರ್ವಜನಿಕ ಗಜಾನನ ಉತ್ಸವ ಸಮಿತಿಗೆ 58 ವರ್ಷ ಭರ್ತಿ

ಮುಧೋಳ : ರನ್ನನಗರಿ ಮುಧೋಳದ ಗಣೇಶ ಉತ್ಸವಕ್ಕೆ ತನ್ನದೆಯಾದ ಇತಿಹಾಸ ಇದೆ. 58 ವರ್ಷಗಳ ಹಿಂದೆ ಕೆಲವು ಸಮಾನ ಮನಸ್ಕರು ಸೇರಿ ಮೊದಲ ಭಾರಿಗೆ ಇಲ್ಲಿನ ರಾಂಪುರ ಗಲ್ಲಿಯಲ್ಲಿ ಹಿಂದು ಧರ್ಮ ಜಾಗೃತಿಗಾಗಿ ಸಾರ್ವಜನಿಕ ಗಣೇಶ ಉತ್ಸವ ಪ್ರಾರಂಭವಾಗಿದ್ದು ಒಂದು ವರ್ಷವೂ ಬಿಡದೆ ನಡೆದುಕೊಂಡು ಬಂದ ನಗರದ ಮೊದಲ ಮಹಾಗಣಪತಿ ಉತ್ಸವ ಇದಾಗಿದೆ.

ನಗರಕ್ಕೂ ಪಕ್ಕದ ಮಹಾರಾಷ್ಟ್ರದ ಕೆಲವು ನಗರಗಳಿಗೂ ಆರ್ಥಿಕ, ಸಾಮಾಜಿಕ, ಕೌಟಿಂಬಿಕ, ಧಾರ್ಮಿಕ ಅವಿನಾಭಾವ ಸಂಬಂಧಗಳಿಂದ ಇಲ್ಲಿ ಹೆಚ್ಚಾಗಿ ಮರಾಠಿ ಭಾಷಿಕರು ಹೆಚ್ಚಾಗಿದ್ದ ಸಮಯವದು, ನಗರದಿಂದ ಇಬ್ಬರು ವ್ಯಕ್ತಿಗಳು ಪ್ರತಿನಿತ್ಯ ಪುಣೆ ನಗರಕ್ಕೆ ವಿವಿದ ವಾಣಿಜ್ಯ ಸಾಮಗ್ರಿಗಳನ್ನು ಸಾಗಿಸಲು ಟ್ರಕ್ ಚಾಲಕರಾಗಿ ಕಾಯಕ ಮಾಡುವಾಗ ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರಿ ಪ್ರಮಾಣದ ಸಾರ್ವಜನಿಕ ಗಣೇಶೋತ್ಸವ ನೋಡಿ ಬಂದು ನಮ್ಮೂರಲ್ಲಿ ಯಾಕೆ ಮಾಡಬಾರದು ಎಂದು ತಿರ್ಮಾನಿಸಿ ಪ್ರಾರಂಭಿಸಿದ ಸಾರ್ವಜನಿಕ ಗಜಾನನ ಉತ್ಸವ ಸಮಿತಿಯ ಗಣೇಶನೇ ಮುಧೋಳದ ಪ್ರಪ್ರಥಮ ಸಾರ್ವಜನಿಕ ಗಣಪತಿ.

ಕೇವಲ ಕೆಲವು ಸಮುದಾಯದ ಮನೆಗಳಲ್ಲಿ ಮಾತ್ರ ಪ್ರತಿಷ್ಠಾಪನೆ ಮಾಡುವ ಈ ಸಂಪ್ರದಾಯವನ್ನು ಪ್ರಪ್ರಥಮವಾಗಿ ಸಾರ್ವಜನಿಕವಾಗಿ 1968ರಲ್ಲಿ ಪ್ರಾರಂಭಿಸಲಾಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶ ಉತ್ಸವ ನಂತರ ಕಡಿಮೆಯಾಗಿ ನಂತರ ಅರವತ್ತರ ದಶಕದಲ್ಲಿ ಮತ್ತೆ ಪ್ರಾರಂಭವಾಯಿತು. ಅಂತಹ ಸಮಯದಲ್ಲಿ ಮೊದಲಿನಿಂದಲು ಹಿಂದು ಸಂಪ್ರದಾಯ, ಸಂಸ್ಕೃತಿಗೆ ಹೆಚ್ಚು ಪ್ರಾದ್ಯಾನ್ಯತೆ ಕೊಡುತ್ತಿದ್ದ ಮುಧೋಳ ಸಂಸ್ಥಾನದ ಬಾಜಿರಾವ್, ವೆಂಕಟೇಶ, ಮಾಲೋಜಿರಾವ್ ಘೋರ್ಪಡೆ ರಾಜರ ಕುಟುಂಬ ಸ್ವತಂತ್ರ್ಯ ನಂತರವೂ ಈ ತರಹದ ಸಂಪ್ರದಾಯಕ್ಕೆ ಆಧ್ಯತೆ ನೀಡುತ್ತಾ ಬಂದಿದೆ.

ಇತಿಹಾಸ: ಟ್ರಕ್ ಚಾಲಕರಾಗಿದ್ದ ಇಬ್ಬರನ್ನು ಕರೆದುಕೊಂಡು ಮಹಾರಾಷ್ಟದ ಪುಣೆ ನಗರದಲ್ಲಿ ಗಣೇಶ ಉತ್ಸವ ನೋಡಿಕೊಂಡು ಬಂದ ರಾಂಪುರ ಗಲ್ಲಿಯ ಬ್ರಾಹ್ಮಣ ಹಾಗೂ ಮರಾಠಾ ಸಮುದಾಯ ಜೊತೆಗೆ ಇತರ ಹಿಂದು ಮುಖಂಡರು 1968ರಲ್ಲಿ ಪ್ರಥಮ ಭಾರಿಗೆ ಸಾರ್ವಜನಿಕ ಗಜಾನನ ಉತ್ಸವ ಸಮಿತಿ ಸ್ಥಾಪನೆ ಮಾಡಿ ಗಣೇಶ ಉತ್ಸವವನ್ನು ಬಹು ವಿಜೃಂಭಣೆಯಿಂದ ಪ್ರಾರಂಭಿಸಿದರು. ಮೊದಲ ವರ್ಷ ಐದು ದಿನದ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಸಲುವಾಗಿ ಮುಷ್ಟಾನ ಭೋಜನವನ್ನು ಸಾರ್ವಜನಿಕರಿಗೆ ದಾರಿ ಹೋಕರಿಗೆ ಹಾಕಿ ಖ್ಯಾತಿ ಪಡೆದ ಈ ಸಮಿತಿ ಅಂದಿನಿಂದ ಇಂದಿನವರೆಗೆ ಏಳು ದಿನದ ಗಣೇಶ ಉತ್ಸವದ ವಿಸರ್ಜನ ಮುಂಚೆ ಅದೇ ಮೃಷ್ಠಾನ್ನ ಭೋಜವನನ್ನು ಹಾಕುತ್ತಾ ಬಂದಿದ್ದಾರೆ. ಈ ಗಣೇಶ ಉತ್ಸವದಲ್ಲಿ ಪ್ರಸಾದ ಸವಿಯದ ಮುಧೋಳಿಗರು ಇಲ್ಲ, ಎನ್ನಬಹುದಾದಷ್ಟು ಇಲ್ಲಿನ ಪ್ರಸಾದ ವ್ಯವಸ್ಥೆ ಅಚ್ಚುಕಟ್ಟಾಗಿ ಇರುತ್ತದೆ.

ಮಹಾರಾಷ್ಟ್ರದ ಸಂಪ್ರದಾಯ ಹಾಗೂ ಸಂಘಟನೆ ಮತ್ತು ಹಿಂದು ಧರ್ಮದ ಉಳಿವಿಗಾಗಿ ಸ್ಥಾಪನೆಯಾದ ಈ ಗಣೇಶ ಉತ್ಸವ ಸಮಿತಿ ಅದರಂತೆ ಆ ಉದ್ದೇಶ ಈಡೇರಿಕೆಗಾಗಿ ಸಾಕಷ್ಟು ಯತ್ನಗಳು ನಡೆಯುತ್ತಾ ಬಂದಿವೆ. ಹೀಗಾಗಿ ಈ ಗಣೇಶ ಎಲ್ಲರಿಗೂ ಮಾದರಿಯಾಗಿದ್ದಾನೆ. ಜೊತೆಗೆ ತೆರಬಂಡಿ, ವಿದ್ಯಾರ್ಥಿಗಳ ನೃತ್ಯ, ಮೊಸರು ಗಡಿಗೆ ಒಡೆಯುವ ಸ್ಪರ್ಧೆ ಸೇರಿದಂತೆ ಐವತ್ತು ವರ್ಷ ಮೇಲ್ಪಟ್ಟ ಹಿರಿಯರಿಗೆ ಸೈಕಲ್ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು ಐವತ್ತನೆಯ ವರ್ಷದ ಸಂಭ್ರಮಾಚರಣೆಯಲ್ಲಿ ಲೋಗೋ ಬಿಡುಗಡೆ ಕಾರ್ಯ ಪ್ರಾರಂಭವಾಗಿದ್ದು ಅಂದಿನಿಂದ ಇಂದಿನವರೆಗೆ ಮುಂಚಿತವಾಗಿ ಲೋಗೋ ಬಿಡುಗಡೆ ಕಾರ್ಯಕ್ರಮ ಜರುತ್ತದೆ. ಮುಂಬೈದಲ್ಲಿನ ಲಾಲಬಾಗ್ ರಾಜಾ ರೀತಿಯಲ್ಲಿ ಇಲ್ಲಿ ಡಬಲ್ ಶೇಟ್ ಗಣೇಶ ಸ್ಥಾಪನೆ ಸಾಮಾನ್ಯವಾಗಿದೆ.

ಸಂಘಟಿಕರು, ರಾಂಪುರ ಗಲ್ಲಿಯಲ್ಲಿ ಎಲ್ಲರೂ ವಿದ್ಯಾವಂತರಾಗಿದ್ದರಿಂದ ಈ ಉತ್ಸವವನ್ನು ದಾಖಲಿಸಿ ಇಂದಿನವರೆಗೆ ನಡೆಸಿಕೊಂಡು ಬಂದಿರುವ ಅಣ್ಣಾರಾವ್ ಭಕ್ಷಿ, ಭೀಮರಾವ್ ಟಂಕಸಾಲಿ, ಮಾಧವರಾವ್ ಮಸೂರಕರ, ಬಾಬುರಾವ ಮಾನೆ, ಶಂಕರ ಘೋರ್ಫಡೆ, ರಾಘವೇಂದ್ರ ಭಕ್ಷಿ, ಡಾ.ಜಿ.ಎಸ್..ಬೀಡೆ, ಮಾಜಿ ಎಂ.ಪಿ ಎಸ್. ಟಿ. ಪಾಟೀಲ್ ರತ್ನಾಕರ ಮಸೂರಕರ ಅಂದು ಪ್ರಾರಂಭಿಸಿದ ಗಣೇಶ ಉತ್ಸವವನ್ನು ಅವರ ಕುಟುಂಬಸ್ತರು ಇಂದಿಗೂ ಈ ಗಲ್ಲಿಯ ಮುಖಂಡರು ಯುವಕರು ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಬಂದಿರುತ್ತಾರೆ.

“ಹಿಂದು ಸಂಪ್ರದಾಯ,ಸಂಸ್ಕೃತಿ ಉಳಿದು ಬೆಳೆಯುವ ಸದುದ್ದೇಶದಿಂದ ಕಳೆದ ೫೮ ವರ್ಷಗಳಿಂದ ಈ ಗಣೇಶ ಉತ್ಸವ ಸಮಿತಿ ಕಾರ್ಯ ಮಾಡಿ ರಾಜ್ಯ ಮಟ್ಟದ ತೆರಬಂಡಿ,ಸೈಕಲ್ ರೇಶ ಸ್ಪರ್ಧೆಗನ್ನು ಆಯೋಜನೆ ಮಾಡುತ್ತಾ ಬಂದಿದೆ”
ವಸಂತ ಮಾನೆ
ವೆಂಕಟೇಶ ಗುಡೆಪ್ಪನವರ

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು