Those who have e-shram card are eligible for BPL card..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Ration card: ದೇಶದ ಬಡವರೂ ನೆಮ್ಮದಿಯಾಗಿ ಮೂರು ಹೊತ್ತು ಊಟ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಪಡಿತರ ವಿತರಿಸಿ ಕೋಟ್ಯಂತರ ಜನರಿಗೆ ಅನುಕೂಲ ಕಲ್ಪಿಸಿವೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್ ಪಡಿತರ ಚೀಟಿ ಮತ್ತು ಬಡತನ ರೇಖೆಗಿಂತ ಮೇಲಿನವರಿಗೆ ಎಪಿಎಲ್ ಪಡಿತರ ಚೀಟಿ. ಹೀಗೆ ಆರ್ಥಿಕವಾಗಿ ಹಿಂದುಳಿದವರಿಗೆ ಪಡಿತರ ಒದಗಿಸಲು ಕ್ರಮವಹಿಸಿದೆ.

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಹಲವು ಸವಲತ್ತುಗಳು ಸಿಗುತ್ತಿದ್ದು, ಉಚಿತ ಆಹಾರ ಧಾನ್ಯಗಳು, ಉಚಿತ ಆರೋಗ್ಯ ಸೇವೆ ಪ್ರಮುಖವಾಗಿವೆ‌. ಈ ಕಾರಣಕ್ಕಾಗಿ ಬಡವರು ಪಡಿತರ ಚೀಟಿ ಮಾಡಿಸಿ ಸರ್ಕಾರದ ಸವಲತ್ತು ಪಡೆಯಲು ಪ್ರಯತ್ನಿಸುತ್ತಾರೆ.

ಆದರೆ, ನಮ್ಮ ದೇಶದಲ್ಲಿ ಎಲ್ಲಾ ಅರ್ಹರು ಬಿಪಿಎಲ್ ಪಡಿತರ ಚೀಟಿ ಪಡೆಯುವುದಿಲ್ಲ. ಕೆಲವರು ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಮಾಡಿಕೊಂಡಿದ್ದಾರೆ. ಪಡಿತರ ಚೀಟಿ ವಿತರಣೆಯಲ್ಲಿ ಆಗಿರುವ ಕೆಲವು ದೋಷಗಳಿಂದ ಕೆಲವೊಮ್ಮೆ ಕುಟುಂಬದ ಕೆಲವರ ಹೆಸರು ಪಡಿತರ ಚೀಟಿಯಲ್ಲಿ ನಾಪತ್ತೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಸಿಗದೆ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈ ಕಾರಣಕ್ಕೆ ಪಡಿತರ ಚೀಟಿಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲು ಸರಕಾರ ಅನುಮತಿ ನೀಡುತ್ತದೆ.

ಕೆಲವರು ಪಡಿತರ ಚೀಟಿಗೆ ಹೆಸರು ಸೇರಿಸಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಪಡಿತರ ಚೀಟಿಗೆ ಹೆಸರು ಸೇರ್ಪಡೆಯಾದವರ ಪಟ್ಟಿ ಬಿಡುಗಡೆಯಾಗಿದೆ.

ಈ ಪಟ್ಟಿಯನ್ನು ಪರಿಶೀಲಿಸಿ, ಅದರಲ್ಲಿ ನಿಮ್ಮ ಹೆಸರಿದೆಯೇ? ಅದರ ಬಗ್ಗೆ ನೀವು ತಿಳಿದುಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಅದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಿರಿ.

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದವರು ಅಧಿಕಾರಿಗೆ ಭೇಟಿ ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಕರ್ನಾಟಕ ಪಡಿತರ ಚೀಟಿ (Ration card) ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:

– ಮೊದಲು, ಇಲ್ಲಿ ನೀಡಿರುವ ಅಧಿಕೃತ ವೆಬ್‌ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
– ಮೆನು ಬಾರ್‌ನಿಂದ, “ಇ-ಸೇವೆಗಳು” ಟ್ಯಾಬ್ ಅನ್ನು ಕ್ಲಿಕ್ ಮಾಡಿ.
– “ಇ-ರೇಷನ್ ಕಾರ್ಡ್” ಲಿಂಕ್ ಅನ್ನು ಕ್ಲಿಕ್ ಮಾಡಿ.

  • ಗ್ರಾಮ ಪಟ್ಟಿ” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
    – ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
  • ಜಿಲ್ಲೆ
  • ತಾಲ್ಲೂಕು
  • ಗ್ರಾಮ ಪಂಚಾಯಿತಿ
  • ಗ್ರಾಮ
    – “ಹೋಗಿ” ಬಟನ್ ಕ್ಲಿಕ್ ಮಾಡಿ.
    – ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  • ಇದನ್ನೂ ಓದಿ: Astrology: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರದಿಂದಿರಿ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ