Karnataka state budget cm siddaramaiah

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು