
ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.
ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.
ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.
ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.