Recruitment of 32,000 Posts in Railway Department

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.

ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು.

Join Our Telegram: https://t.me/dcgkannada

ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.

2024 ನೇ ಸಾಲಿನ, 8ನೇ ನೀರ ನೇಮಕಾತಿ ಅದಿ ಸೂಚನೆಯನ್ನು ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿದೆ. ಈಗ ಕೇವಲ ಶಾರ್ಟ್ ನೋಟಿಫಿಕೇಶನ್ ಮಾತ್ರ ಬಿಡುಗಡೆ ಮಾಡಿದೆ. 2025 ಜನವರಿಯಲ್ಲಿ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಅರ್ಜಿ ಸ್ವೀಕೃತಿಯನ್ನು ಆರಂಭಿಸಲಿದೆ. ಒಟ್ಟು 32,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಕೇವಲ SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನೀವು ಕೇಂದ್ರ ಸರ್ಕಾರ ಉದ್ಯೋಗವನ್ನು ಬಯಸಿ, ಸುಲಭ ಪರೀಕ್ಷೆ ವಿಧಾನ ಹಾಗೂ ಆಕರ್ಷಕ ಸಂಬಳದ ಉದ್ಯೋಗವನ್ನು ನೋಡುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಲಿದೆ. ಜನವರಿ 2025 ತಿಂಗಳಿನಿಂದ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

ಇಲಾಖೆಯ ಹೆಸರು: ಭಾರತೀಯ ರೈಲ್ವೆ ಇಲಾಖೆ (Indian Railway)

ಹುದ್ದೆಯ ಹೆಸರು: ವಿವಿಧ ಗ್ರೂಪ್ ಡಿ ಹುದ್ದೆಗಳು

ಖಾಲಿ ಇರುವ ಹುದ್ದೆಗಳು: 32,000

ಉದ್ಯೋಗ ಸ್ಥಳ : All India

ವೇತನ ಶ್ರೇಣಿ: ನಿಯಮದ ಪ್ರಕಾರ

ಅರ್ಜಿ ಸಲ್ಲಿಸುವ ಬಗೆ: Online

ಶೈಕ್ಷಣಿಕ ಅರ್ಹತೆ: ಭಾರತೀಯ ರೈಲ್ವೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ SSLC ಅಥವಾ ITI ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ವಯೋಮಿತಿಯನ್ನು ಮೀರಿರಬಾರದು.

ಖಾಲಿ ಇರುವ ಹುದ್ದೆಗಳು: ರೈಲ್ವೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 32 ಸಾವಿರ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳ ವಿವರಗಳು(Railway Group D Posts List)

ಟ್ರ್ಯಾಕ್ ಮೇಂಟೆನರ್ ಗ್ರೇಡ್‌ IV
ತಾಂತ್ರಿಕ ವಿಭಾಗದ ಸಹಾಯಕ
ಅಸಿಸ್ಟಂಟ್‌ ಪಾಯಿಂಟ್ಸ್‌ಮನ್
ಟ್ರ್ಯಾಕ್ ಮ್ಯಾನ್
ಅಸಿಸ್ಟೆಂಟ್ ಬ್ರಿಡ್ಜ್
ಇತರೆ ಹಲವು ವಿಭಾಗಗಳ level 1 ಹುದ್ದೆಗಳು
ಕೋವಿಡ್ ಹಿನ್ನೆಲೆಯಲ್ಲಿ ಪ್ರವರ್ಗಗಳ ವಯಸ್ಸಿನ ಮಿತಿಯನ್ನು ಸಡಿಲಿಕ್ಕೆ ಮಾಡಲಾಗಿದೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಓದಿ.

ಪ್ರಮುಖ ದಿನಾಂಕಗಳು:

ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ದಿನಾಂಕ 24/12/2024
ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ 23/01/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/02/2025
ನೇಮಕ ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗಗಳ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,

ಸಾಮಾನ್ಯ ಅರ್ಹತೆ, OBC, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ ರೂ.500. (Rs.400 ರೀಫಂಡ್‌ ಮಾಡಲಾಗುತ್ತದೆ).
ವಿಶೇಷ ಚೇತನರು, ಮಹಿಳಾ, ತೃತೀಯ ಲಿಂಗಿಗಳು, ಮಾಜಿ ಸೈನಿಕರು, SC, ST ಅಭ್ಯರ್ಥಿಗಳಿಗೆ ಶುಲ್ಕ ರೂ.250. ಬ್ಯಾಂಕ್‌ ಚಾರ್ಜ್‌ ಹೊರತುಪಡಿಸಿ, ಉಳಿದ ಹಣ ರೀಫಂಡ್‌ ಮಾಡಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

www.rrbbnc.gov.in

ಮೊದಲು ಮೇಲೆ ಕಾಣಿಸಿದ RRB ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 22 ಫೆಬ್ರುವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ, ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು. ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.

ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆಯ ವಿಧಾನ:
ರೈಲ್ವೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಕೇವಲ ಒಂದು ಹಂತ ಅಥವಾ ಎರಡು ಹಂತಗಳಲ್ಲಿ ನಡೆಸುವ ಹಕ್ಕನ್ನು ಒಂದಿದೆ, ಗ್ರೂಪ್ ಡಿ ಅಬ್ಯರ್ಥಿಗಳು ಸ್ವಚ್ಛತೆ, ಟ್ರ್ಯಾಕ್ ನಿರ್ವಹಣೆ, ರೈಲ್ವೆ ಮೆಂಟೇನೆನ್ಸ್, ನಿರ್ವಹಣೆ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ 18,000 ವೆತನವನ್ನು ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ರೈಲ್ವೆ ಗ್ರೂಪ್ ಡಿ ಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ನೇಮಕ ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.

ಇದನ್ನೂ ಓದಿ: https://t.me/dcgkannada

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು