ಕಬ್ಬು ಸಾಗಾಣಿಕ ಟ್ರಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಬ್ಯಾನರ್ : ಕಬ್ಬು ಸಾಗಿಸುವಾಗ ಎಚ್ಚರಿಕೆ ವಹಿಸಿ- ನಂದಗಾವಿ

ಕಬ್ಬು ಸಾಗಾಣಿಕ ಟ್ರಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಬ್ಯಾನರ್ : ಕಬ್ಬು ಸಾಗಿಸುವಾಗ ಎಚ್ಚರಿಕೆ ವಹಿಸಿ- ನಂದಗಾವಿ

ಮುದ್ದೇಬಿಹಾಳ : ಕಬ್ಬು ಹೇರಿಕೊಂಡು ರಸ್ತೆಯಲ್ಲಿ ಸಾಗಿಸುವಾಗ ಸಂಚಾರಿ ನಿಯಮಗಳನ್ನು ಅನುಸರಿಸಿ ಅಪಘಾತಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಹೇಳಿದರು.

ತಾಲ್ಲೂಕು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರದಂದು ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಕಬ್ಬು ಸಾಗಾಣಿಕೆ ಮಾಡುವ ವಾಹನಗಳ ಚಾಲಕ ಮತ್ತು ಮಾಲಕರ ಸಭೆಯಲ್ಲಿ ಅವರು ಮಾತನಾಡಿದರು.

ಕಬ್ಬು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು.ಚಾಲಕರು ರಾತ್ರಿ ವೇಳೆಯಲ್ಲಿ ಚಾಲನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಕಬ್ಬು ಸಾಗಿಸುವ ಸಮಯದಲ್ಲಿ ಫ್ಯಾಕ್ಟರಿ ಆಡಳಿತ ಮಂಡಳಿಯವರು, ಟ್ರಾö್ಯಕ್ಟರ್ ಚಾಲಕ ಮತ್ತು ಮಾಲೀಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ನೋಟಿಸ್ ನೀಡಲಾಯಿತು.
ಅಲ್ಲದೇ ಸುಮಾರು 50 ಟ್ರಾö್ಯಕ್ಟರ್‌ಗಳ ಹಿಂಬದಿಯಲ್ಲಿ ರೆಫ್ಲೆಕ್ಟರ್ ಬ್ಯಾನರ್‌ಗಳನ್ನು ಕಟ್ಟಲಾಯಿತು.ರೇಡಿಯಂಗಳನ್ನು ಹಚ್ಚಲಾಯಿತು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ,ಬಾಲಾಜಿ ಸಕ್ಕರೆ ಕಾರ್ಖಾನೆ ವಿಭಾಗದ ಅಧಿಕಾರಿಗಳು ಇದ್ದರು.

Latest News

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ