ಕಬ್ಬು ಸಾಗಾಣಿಕ ಟ್ರಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಬ್ಯಾನರ್ : ಕಬ್ಬು ಸಾಗಿಸುವಾಗ ಎಚ್ಚರಿಕೆ ವಹಿಸಿ- ನಂದಗಾವಿ

ಕಬ್ಬು ಸಾಗಾಣಿಕ ಟ್ರಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಬ್ಯಾನರ್ : ಕಬ್ಬು ಸಾಗಿಸುವಾಗ ಎಚ್ಚರಿಕೆ ವಹಿಸಿ- ನಂದಗಾವಿ

ಮುದ್ದೇಬಿಹಾಳ : ಕಬ್ಬು ಹೇರಿಕೊಂಡು ರಸ್ತೆಯಲ್ಲಿ ಸಾಗಿಸುವಾಗ ಸಂಚಾರಿ ನಿಯಮಗಳನ್ನು ಅನುಸರಿಸಿ ಅಪಘಾತಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಹೇಳಿದರು.

ತಾಲ್ಲೂಕು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರದಂದು ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಕಬ್ಬು ಸಾಗಾಣಿಕೆ ಮಾಡುವ ವಾಹನಗಳ ಚಾಲಕ ಮತ್ತು ಮಾಲಕರ ಸಭೆಯಲ್ಲಿ ಅವರು ಮಾತನಾಡಿದರು.

ಕಬ್ಬು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು.ಚಾಲಕರು ರಾತ್ರಿ ವೇಳೆಯಲ್ಲಿ ಚಾಲನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಕಬ್ಬು ಸಾಗಿಸುವ ಸಮಯದಲ್ಲಿ ಫ್ಯಾಕ್ಟರಿ ಆಡಳಿತ ಮಂಡಳಿಯವರು, ಟ್ರಾö್ಯಕ್ಟರ್ ಚಾಲಕ ಮತ್ತು ಮಾಲೀಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ನೋಟಿಸ್ ನೀಡಲಾಯಿತು.
ಅಲ್ಲದೇ ಸುಮಾರು 50 ಟ್ರಾö್ಯಕ್ಟರ್‌ಗಳ ಹಿಂಬದಿಯಲ್ಲಿ ರೆಫ್ಲೆಕ್ಟರ್ ಬ್ಯಾನರ್‌ಗಳನ್ನು ಕಟ್ಟಲಾಯಿತು.ರೇಡಿಯಂಗಳನ್ನು ಹಚ್ಚಲಾಯಿತು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ,ಬಾಲಾಜಿ ಸಕ್ಕರೆ ಕಾರ್ಖಾನೆ ವಿಭಾಗದ ಅಧಿಕಾರಿಗಳು ಇದ್ದರು.

Latest News

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ

ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್

ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್

ಶ್ರೀನಗರ: ಪಾಕಿಸ್ತಾನ ಪ್ರೇರಿತ ಉಗ್ರರಿಂದ ಕಾಶ್ಮೀರದ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ

ನಿವೃತ್ತ ಕರ್ನಲ್ ಬಿರಾದಾರಗೆ ಅದ್ದೂರಿ ಸ್ವಾಗತ

ನಿವೃತ್ತ ಕರ್ನಲ್ ಬಿರಾದಾರಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ಸೇನೆಯಲ್ಲಿ ಸೇನಾಧಿಕಾರಿಯಾಗಿ 36 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ಶಿವಾನಂದ ಬಿ. ಬಿರಾದಾರ ಅವರನ್ನು ಭಾನುವಾರ ಮಾಜಿ ಸೈನಿಕರು, ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಸಾಗಿ ಸ್ವಗ್ರಾಮ ಬಳವಾಟಕ್ಕೆ ಬೀಳ್ಕೊಡಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮುಖಂಡರಾದ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ, ಎಂ. ಬಿ. ನಾವದಗಿ, ಆರ್. ಎಸ್. ಪಾಟೀಲ ಕೂಚಬಾಳ, ಮಾಜಿ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಕೆಲಸಗಳನ್ನು ಪಡೆದಿರುವ ನಾಲ್ವರು ಗುತ್ತಿಗೆದಾರರು ಹಿಡಿದ ಕೆಲಸವನ್ನು ಪೂರ್ಣಗೊಳಿಸದೇ ನಿರಾಸಕ್ತಿ ತೋರುತ್ತಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ. ಅಂತವರು ಕೆಲಸ ತ್ವರಿತವಾಗಿ ಆರಂಭಿಸದಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಸಿ. ಎಸ್. ನಾಡಗೌಡ ಹೇಳಿದರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಎರಡ್ಮೂರು ಬಾರಿ ಕೆಲಸ ಮಾಡದ