Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ