Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.