Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ