Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ