Rehabilitation Campaing One child labor protected by officers in narayanapur

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು.

Join Our telegram: https://t.me/dcgkannada

ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶಿವರಾಜ್ ಜಮಾದಾರ್, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿಯಂತ್ರಣವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರಿಗೆ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳುಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ ಒಂದು ಮಗುವನ್ನು ಬಾಲ ಕಾರ್ಮಿಕ‌ ಪದ್ಧತಿಯಿಂದ‌ ರಕ್ಷಿಸಲಾಯಿತು.

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ