Release of Pedagogical Artist Appreciation Book: Social Work by Polish Teachers - Kudalasangama Shri

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು ಬದುಕಿನುದ್ದಕ್ಕೂ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ತಾಲ್ಲೂಕು ನೆರಬೆಂಚಿಯ ಎಚ್ಚರೇಶ್ವರ ದೇವಸ್ಥಾನದಲ್ಲಿ ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶ ಅವರ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಸಂಶೋಧಕರಿಗೆ ಆಕರ ಗ್ರಂಥವಾಗಿದೆ. ಆದರ್ಶ ಶಿಕ್ಷಕರಾದ ನಾಗಪ್ಪ ಪೋಲೇಶಿ ಶಿಕ್ಷಕರ ಬದುಕು ಯುವ ಜನಾಂಗಕ್ಕೆ ಮಾದರಿಯಾದದು ಎಂದು ಹೇಳಿದರು.

ಮುದ್ದೇಬಿಹಾಳ ಎಸ್.ಜಿ.ವ್ಹಿ.ಸಿ ವಿದ್ಯಾ ಪ್ರಸಾರಕ ವಿಶ್ವಸ್ಥ ನಿಧಿಯ ಕಾರ್ಯದರ್ಶಿ ಅಶೋಕ ತಡಸದ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಶಿಕ್ಷಕರಿಗೆ ಕೊಡುವ ಗೌರವ ಅಪಾರವಾದದ್ದು, ಇಂಥವರ ಬದುಕಿನ ಬಗ್ಗೆ ಗ್ರಂಥ ಮಾಡಿ ಸಾಹಿತ್ಯ ಕ್ಷೇತ್ರಕ್ಕೆ ಕೊಡಮಾಡಿದ ಪ್ರಕಾಶ ನರಗುಂದ ಅವರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಧಾರವಾಡದ ಸಾಹಿತಿ ಸಂಗಮನಾಥ ಲೋಕಾಪುರ ಮಾತನಾಡಿ, ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಹಲವಾರು ಮಹನೀಯರ ಕೊಡುಗೆ ಇದೆ. ಬದುಕಿನುದ್ದಕ್ಕೂ ಹಲವಾರು ಕಷ್ಟಗಳನ್ನು ಅನುಭವಿಸಿ ವಿದ್ಯಾರ್ಥಿಗಳಿಗೆ ನೈತಿಕತೆಯ ಬೋಧನೆ ಮಾಡುವುದರ ಮೂಲಕ ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆಯನ್ನಾಗಿ ರೂಪಿಸಿದ್ದಾರೆ ಎಂದರು.

ಗ್ರಂಥದ ಸಂಪಾದಕರಾದ ಎಂ.ಜಿ.ವಿ.ಸಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರಕಾಶ ನರಗುಂದ ಶಿಕ್ಷಣ ಶಿಲ್ಪಿ ಕೃತಿಯ ಬಗ್ಗೆ ವಿವರಿಸಿದರು. ಇಟಗಿ ಗುರುಶಾಂತವೀರ ಶಿವಾಚಾರ್ಯರು, ತಾಲ್ಲೂಕು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರ ಹಿರೇಗೌಡರ, ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಹಾಲಗಂಗಾಧರಮಠ, ಆಲೂರಿನ ಗುರುಲಿಂಗಪ್ಪಗೌಡ ಹಿರೇಗೌಡರ, ಪ್ರೊ. ಎಸ್. ಎಸ್. ಹೂಗಾರ, ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶಿ, ಎಂ. ಜಿ. ವಿ. ಸಿ ಕಾಲೇಜಿನ ಪ್ರಾಚಾರ್ಯ ಎಸ್. ಎನ್. ಪೊಲೇಶಿ, ನಾಲತವಾಡದ ನಿವೃತ್ತ ಪ್ರಾಚಾರ್ಯ ಎಸ್. ಎನ್. ಕಂಗಳ, ಪರಶುರಾಮ ಪವಾರ, ಬಿ. ಎ. ಗೂಳಿ ಉಪಸ್ಥಿತರಿದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ