ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.

ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ
ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ
ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ
ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ
ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ
ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ
ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ
ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್ಗಳಿಂದ ರಂಗೇರಿದ ಕುಸ್ತಿ
ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್ಗಳಿಂದ ರಂಗೇರಿದ ಕುಸ್ತಿ
ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.