ವಿಶೇಷ ವರದಿ-ಶಂಕರ ಹೆಬ್ಬಾಳ
ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆಯಿಂದ ಆನಂದಗೌಡ ಬಿರಾದಾರ, ಕೃಷಿ ಇಲಾಖೆಯಿಂದ ಅರವಿಂದ ಹೂಗಾರ ಹಾಗೂ ಶಿಕ್ಷಣ ಇಲಾಖೆಯಿಂದ ಬಸನಗೌಡ ಮುದ್ನೂರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಸೋಮವಾರ ಸಂಜೆಯವರೆಗೂ ನಡೆದ ಪ್ರಕ್ರಿಯೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಬಸನಗೌಡ ಮುದ್ನೂರ ಹಾಗೂ ಆನಂದಗೌಡ ಬಿರಾದಾರ ಅವರಿಬ್ಬರು ಹೂಗಾರ ಅವರನ್ನು ಬೆಂಬಲಿಸಿ ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದ ಕಾರಣ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟೀಮನಿ ತಿಳಿಸಿದರು.
ಸಹಾಯಕರಾಗಿ ಭೀಮಸಿ ಹೂಗಾರ ಕಾರ್ಯನಿರ್ವಹಿಸಿದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಅರವಿಂದ ಹೂಗಾರ ಅವರನ್ನು ಆರೋಗ್ಯ ಇಲಾಖೆಯ ನೌಕರರು ಅಭಿನಂದಿಸಿದರು.
—
ಸಂಘಟನಾ ಚತುರರು, ಸದ್ದಿಲ್ಲದೇ ನೌಕರರ ಹಿತ ಬಯುಸುವವರು :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರವಿಂದ ಹೂಗಾರ ಸಂಘಟನಾ ಚತುರರು.ಸರಳ ಜೀವಿಗಳು ಮೃದು ಸ್ವಭಾವದವರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬ್ಯಾಂಕ್ ನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಎಂದರೆ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ಆಪ್ತರಾಗಿ, ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಹೂಗಾರ ಅವರಿಗೆ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸ್ಥಾನ ಅನಾಯಾಸವಾಗಿ ಲಭಿಸಿರುವುದು ಅವರ ಸಂಘಟನಾ ಚಾತುರ್ಯಕ್ಕೆ ದೊರೆತ ಮನ್ನಣೆ ಎಂದೇ ವಿಶ್ಲೇಷಿಸಲಾಗುತ್ತಿದೆ.
—
ಕೃಷಿ ಇಲಾಖೆಯ ಹಿಂದಿನ ಅಧಿಕಾರಿ ಎಸ್.ಆರ್.ಕಟ್ಟೀಮನಿ ಕಳೆದ 4 ಅವಧಿಯಲ್ಲಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.ಇದೀಗ ಹೂಗಾರ ಅವರೂ ಅದೇ ಇಲಾಖೆಯಿಂದ ಬಂದಿದ್ದು ಅಧ್ಯಕ್ಷ ಸ್ಥಾನ ಕೃಷಿ ಇಲಾಖೆಯಲ್ಲಿ ಉಳಿದಂತಾಗಿದೆ.
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
Latest News
ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು
ಹುಲ್ಲೂರ ಎಸ್ಎನ್ಡಿ ಪಬ್ಲಿಕ್ ಸ್ಕೂಲ್ಗೆ ಶೇ.100ರಷ್ಟು ಫಲಿತಾಂಶ
ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ
ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ
ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್
ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ
ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ
ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ
ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.
ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ
ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ







