Renukacharya Siddhanta Exemplary: PDO SG Parasannavara

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ ಮಹನಿಯರ ಜಯಂತಿ ಉತ್ಸವ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪಿಡಿಒ ಎಸ್ ಜಿ ಪರಸನ್ನವರ ಹೇಳಿದರು.

ಗ್ರಾಪಂ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಶಾಂತಿ ಸಂದೇಶವನ್ನು ಸಾರಿದ ಆದಿಜಗದ್ಗುರು ರೇಣುಕಾಚಾರ್ಯರು ಧರ್ಮ ಸಂಸ್ಕಾರವನ್ನು ನೀಡಿ ಸಮಾಜವನ್ನು ಮುನ್ನಡೆಸುವ ಕಾರ್ಯ ಮಾಡಿದ್ದಾರೆ.

ಪತ್ರಕರ್ತ ಆರ್ ಎಸ್ ಹಿರೇಮಠ ಮಾತನಾಡಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಎಲ್ಲ ಶಾಲೆ ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.

ಅಧ್ಯಕ್ಷೆ ರೇಣುಕಾ ಹಿರಗನ್ನವರ, ಉಪಾಧ್ಯಕ್ಷೆ ಲಲಿತಾ ಪೂಜಾರ, ಹನಮಂತ ನರಗುಂದ, ವೆಂಕಣ್ಣ ಹೊರಕೇರಿ, ಮಾರುತಿ ತಳವಾರ, ಲಲಿತಾ ಹುನಗುಂದ, ಶೇಖಪ್ಪ ಪವಾಡಿನಾಯ್ಕರ್, ಲಕ್ಷö್ಮಣ ದಾದನಟ್ಟಿ, ಸಣ್ಣಬೀರಪ್ಪ ದ್ಯಾವನಗೌಡ್ರ, ರಾಮನಗೌಡ ದ್ಯಾವನಗೌಡ್ರ, ಶಿವವ್ವ ಕರಲಿಂಗನ್ನವರ, ಶ್ಯಾಮಲಾ ಮಾದರ, ಶಿವಾನಂದ ಮಣ್ಣೂರ. ದ್ಯಾವಕ್ಕ ಕರಿಗಾರ, ನೇತ್ರಾವತಿ ಹಡಪದ, ನಾಗವ್ವ ದಂಡಿನ, ಬಸವರಾಜ ಕಟ್ಟಿಕಾರ, ಬಸವ್ವ ತೂರನೂರ, ಕಮಲವ್ವ ಪಾಟೀಲ, ಕಾರ್ಯದರ್ಶಿ ಬಂದೆನವಾಜ ಮುಲ್ಲಾ, ಮಹಮ್ಮದ ತಾಳಿಕೋಟೆ, ಪ್ರಕಾಶ, ಗಣೇಶ, ಬಸವರಾಜ, ನ್ಯಾಮದೇವ, ಆನಂದ, ರಂಗಪ್ಪ, ರಿಂದಪ್ಪ, ಅಸ್ಲಾಂ ಇದ್ದರು.

ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸುವಂತೆ ಬಾದಾಮಿ ತಹಸಿಲ್ದಾರ ಮಧುರಾಜ ವಾಟ್ಸೆಪ್ ಮೂಲಕ ಸಂದೇಶ ರವಾನಿಸಿ ಆದೇಶ ನೀಡಿದರೂ ಕೆಲವರು ಜಯಂತಿ ಆಚರಿಸದೆ ಅಲಕ್ಷ ತೋರಿದ್ದಾರೆ. ಸಮಾಜಕ್ಕಾಗಿ ಹೋರಾಡಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರ ಜಯಂತಿಗಳನ್ನ ಮರೆಯಬಾರದು. ಮತ್ತೊಮ್ಮೆ ಹಿಗಾಗದಂತೆ ನೋಡಿಕೊಂಡು ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ಮನವಿ ಮಾಡಿದರು. ಆರ್ ಎಸ್ ಹಿರೇಮಠ ಜಂಗಮ ಸಮಾಜದ ಮುಖಂಡರು ಇದ್ದರು.

Latest News

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೂಡು ಗಾಡಿ ಸ್ಪರ್ಧೆಯಲ್ಲಿ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪುರಸ್ಕೃತ ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ಅವರನ್ನುಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಎ. ಆರ್. ಮುಲ್ಲಾ, ಎಂ. ಜಿ ವ್ಹಿ. ಸಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು ಸಾಹಿತಿಗಳಾದ ಡಾ. ಪ್ರಕಾಶ ಎನ್ ನರಗುಂದ ಹಾಗೂ ಶಿಕ್ಷಕರಾದ ಎಲ್. ಎಂ ಚಲವಾದಿ ಅವರು ಶಾರದಳ್ಳಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಇದೇ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ ಆರೋಪದ ಮೇರೆಗೆ ಗೂಡ್ಸ್ ಚಾಲಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಮುದ್ದೇಬಿಹಾಳ ಪಟ್ಟಣದಿಂದ ತಂಗಡಗಿ ಕಡೆಗೆ ಹಾಲು ತೆಗೆದುಕೊಂಡು ತೆರಳುತ್ತಿದ್ದ ಗೂಡ್ಸ್ ವಾಹನ ಚಾಲಕ ಶ್ರೀಕಾಂತ ಪಡೇಕನೂರ ಅಜಾಗರೂಕತೆಯಿಂದ ಇಲಕಲ್‌ದಿಂದ ಮುದ್ದೇಬಿಹಾಳ ಕಡೆಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಸಿ ಬಸ್‌ನ್ನು ಜಖಂಗೊಳಿಸಿದ್ದು ತನ್ನ ವಾಹನವನ್ನು ಜಖಂ ಮಾಡಿಕೊಂಡು ತಾನು ಗಂಭೀರವಾಗಿ