Renukacharya Siddhanta Exemplary: PDO SG Parasannavara

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ ಮಹನಿಯರ ಜಯಂತಿ ಉತ್ಸವ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪಿಡಿಒ ಎಸ್ ಜಿ ಪರಸನ್ನವರ ಹೇಳಿದರು.

ಗ್ರಾಪಂ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಶಾಂತಿ ಸಂದೇಶವನ್ನು ಸಾರಿದ ಆದಿಜಗದ್ಗುರು ರೇಣುಕಾಚಾರ್ಯರು ಧರ್ಮ ಸಂಸ್ಕಾರವನ್ನು ನೀಡಿ ಸಮಾಜವನ್ನು ಮುನ್ನಡೆಸುವ ಕಾರ್ಯ ಮಾಡಿದ್ದಾರೆ.

ಪತ್ರಕರ್ತ ಆರ್ ಎಸ್ ಹಿರೇಮಠ ಮಾತನಾಡಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಎಲ್ಲ ಶಾಲೆ ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.

ಅಧ್ಯಕ್ಷೆ ರೇಣುಕಾ ಹಿರಗನ್ನವರ, ಉಪಾಧ್ಯಕ್ಷೆ ಲಲಿತಾ ಪೂಜಾರ, ಹನಮಂತ ನರಗುಂದ, ವೆಂಕಣ್ಣ ಹೊರಕೇರಿ, ಮಾರುತಿ ತಳವಾರ, ಲಲಿತಾ ಹುನಗುಂದ, ಶೇಖಪ್ಪ ಪವಾಡಿನಾಯ್ಕರ್, ಲಕ್ಷö್ಮಣ ದಾದನಟ್ಟಿ, ಸಣ್ಣಬೀರಪ್ಪ ದ್ಯಾವನಗೌಡ್ರ, ರಾಮನಗೌಡ ದ್ಯಾವನಗೌಡ್ರ, ಶಿವವ್ವ ಕರಲಿಂಗನ್ನವರ, ಶ್ಯಾಮಲಾ ಮಾದರ, ಶಿವಾನಂದ ಮಣ್ಣೂರ. ದ್ಯಾವಕ್ಕ ಕರಿಗಾರ, ನೇತ್ರಾವತಿ ಹಡಪದ, ನಾಗವ್ವ ದಂಡಿನ, ಬಸವರಾಜ ಕಟ್ಟಿಕಾರ, ಬಸವ್ವ ತೂರನೂರ, ಕಮಲವ್ವ ಪಾಟೀಲ, ಕಾರ್ಯದರ್ಶಿ ಬಂದೆನವಾಜ ಮುಲ್ಲಾ, ಮಹಮ್ಮದ ತಾಳಿಕೋಟೆ, ಪ್ರಕಾಶ, ಗಣೇಶ, ಬಸವರಾಜ, ನ್ಯಾಮದೇವ, ಆನಂದ, ರಂಗಪ್ಪ, ರಿಂದಪ್ಪ, ಅಸ್ಲಾಂ ಇದ್ದರು.

ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸುವಂತೆ ಬಾದಾಮಿ ತಹಸಿಲ್ದಾರ ಮಧುರಾಜ ವಾಟ್ಸೆಪ್ ಮೂಲಕ ಸಂದೇಶ ರವಾನಿಸಿ ಆದೇಶ ನೀಡಿದರೂ ಕೆಲವರು ಜಯಂತಿ ಆಚರಿಸದೆ ಅಲಕ್ಷ ತೋರಿದ್ದಾರೆ. ಸಮಾಜಕ್ಕಾಗಿ ಹೋರಾಡಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರ ಜಯಂತಿಗಳನ್ನ ಮರೆಯಬಾರದು. ಮತ್ತೊಮ್ಮೆ ಹಿಗಾಗದಂತೆ ನೋಡಿಕೊಂಡು ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ಮನವಿ ಮಾಡಿದರು. ಆರ್ ಎಸ್ ಹಿರೇಮಠ ಜಂಗಮ ಸಮಾಜದ ಮುಖಂಡರು ಇದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ