Request for new bus service from Kalaburagi to Vijayapura at night

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು.

ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವ
ನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ ಇರುವದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ ರಾತ್ರಿ ವೇಳೆ ನಾರಾಯಣಪೂರ ಮಾರ್ಗವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಮತ್ತು ಶಹಾಪುರದಿಂದ ಧಾರವಾಡ ಹುಬ್ಬಳ್ಳಿಗೆ ನಾರಾಯಣಪುರ ಮಾರ್ಗವಾಗಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆಗೆ ಹೊಸ ಬಸ್ ಸಂಚಾರ ಆರಂಭಿಸುವದರಿಂದ ಈ ಭಾಗದ ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ನಗರ ಪಟ್ಟಣದ ವೈದ್ಯಕೀಯ ಸೇವೆ ಪಡೆಯಲು ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ, ಇದನ್ನು ಸಾರಿಗೆ ಅಧಿಕಾರಿಗಳು ಮನಗಂಡು ಶೀಘ್ರವೇ ಹೊಸ ಬಸ್‌ಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ಹಣಮಗೌಡ ಪೊಲಿಸ್ ಪಾಟೀಲ್, ಪ್ರಶಾಂತ ರಾಠಿ, ಸಂಗಯ್ಯ ಹಿರೇಮಠ, ಹಣಮಂತರಾಯ, ನಾರಾಯಣ ನವಲೆ,ಗಜಾನನ ಮುತ್ತು, ಬಸವರಾಜ, ದೇವಣ್ಣ, ಶರಣು, ಇಬ್ರಾಹಿಂ, ಸದ್ದಾಂ, ವೀರಮುತ್ತು ಸೇರಿ ಇತರರು ಇದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ