Request for new bus service from Kalaburagi to Vijayapura at night

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು.

ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವ
ನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ ಇರುವದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಹೀಗಾಗಿ ರಾತ್ರಿ ವೇಳೆ ನಾರಾಯಣಪೂರ ಮಾರ್ಗವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಮತ್ತು ಶಹಾಪುರದಿಂದ ಧಾರವಾಡ ಹುಬ್ಬಳ್ಳಿಗೆ ನಾರಾಯಣಪುರ ಮಾರ್ಗವಾಗಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆಗೆ ಹೊಸ ಬಸ್ ಸಂಚಾರ ಆರಂಭಿಸುವದರಿಂದ ಈ ಭಾಗದ ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ನಗರ ಪಟ್ಟಣದ ವೈದ್ಯಕೀಯ ಸೇವೆ ಪಡೆಯಲು ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ, ಇದನ್ನು ಸಾರಿಗೆ ಅಧಿಕಾರಿಗಳು ಮನಗಂಡು ಶೀಘ್ರವೇ ಹೊಸ ಬಸ್‌ಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ಹಣಮಗೌಡ ಪೊಲಿಸ್ ಪಾಟೀಲ್, ಪ್ರಶಾಂತ ರಾಠಿ, ಸಂಗಯ್ಯ ಹಿರೇಮಠ, ಹಣಮಂತರಾಯ, ನಾರಾಯಣ ನವಲೆ,ಗಜಾನನ ಮುತ್ತು, ಬಸವರಾಜ, ದೇವಣ್ಣ, ಶರಣು, ಇಬ್ರಾಹಿಂ, ಸದ್ದಾಂ, ವೀರಮುತ್ತು ಸೇರಿ ಇತರರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ