ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು