ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ