ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600