ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ