Rescue and Rehabilitation Campaing

ಹಠಾತ್ ದಾಳಿ.. 12 ಮಕ್ಕಳ ರಕ್ಷಣೆ..

ಹಠಾತ್ ದಾಳಿ.. 12 ಮಕ್ಕಳ ರಕ್ಷಣೆ..

ಶಹಾಪುರ : Rescue and Rehabilitation Campaing (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಉಪ ತಹಶೀಲ್ದಾರ್ ಶಹಾಪುರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ನಂತರ ಮಾತನಾಡಿದ ಶಹಾಪುರ ಉಪ- ತಹಶೀಲ್ದಾರ್ ಸೇತುಮಾಧವ ರವರು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

Join Our Telegram: https://t.me/dcgkannada

ಸಭೆಯ ನಂತರ ನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ, 12 ಮಕ್ಕಳನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.

ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ದಿವ್ಯರಾಣಿ ರವರು ಮಾತನಾಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ, ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01.08.2024 ರಿಂದ 31.08.2024ರ ರವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಶ್ರೀ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ‌ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಶಹಾಪುರ ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ. 20,000 ರೂಗಳಿಂದ 50,000 ರೂ. ಗಳವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಹಠಾತ್ ದಾಳಿ ಸಂಧರ್ಭದಲ್ಲಿ ಶ್ರೀಮತಿ ದಿವ್ಯರಾಣಿ ಎಸ್ ನಾಯಕ ಸಹಾಯಕ ಸರ್ಕಾರಿ ಅಭಿಯೋಜಕರು ಶಹಾಪುರ, ಶ್ರೀಮತಿ ಸತ್ಯಮ್ಮ ಹೊಸಮನಿ ಪ್ಯಾನಲ್ ವಕೀಲರು ಶಹಾಪುರ, ಸಿದ್ದು ಪಸ್ಪುಲ್ ಪ್ಯಾನಲ್ ವಕೀಲರು ಶಹಾಪುರ, ಲಕ್ಷ್ಮೀಕಾಂತ ಶಿಬರಬಂಡಿ ಪ್ಯಾನಲ್ ವಕೀಲರು ಶಹಾಪುರ, ಶೀರಸ್ತೇದಾರರಾದ ಸೋಮನಾಥ ಅಂಗಡಿ, ಶ್ರೀ ಸಂಗಣ್ಣ ನುಚ್ಚಿನ್ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಶಹಾಪುರ, ಬಾಲರಾಜ್ ಕೋರಬಾರ ಮ್ಯಾನೆಜರ್ ಸಮಾಜ ಕಲ್ಯಾಣ ಇಲಾಖೆ ಶಹಾಪುರ, ಕಾರ್ಮಿಕ ಇಲಾಖೆಯ ಮೊಹಮ್ಮದ್ ಏಥೇಶ್ಯಾಮ್, ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಶ್ರೀ ಪರ್ವತರೆಡ್ಡಿ, ಮಕ್ಕಳ ಸಹಾಯವಾಣಿ 1098ನ ಮಹೇಶ ಕುಮಾರ್, ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ