ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ ಹೆಚ್ಚಿಸುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು.

ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಧಕರ ಸನ್ಮಾನ,ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಇನ್ನು ಕೆಲವರು ಸನ್ಮಾನಕ್ಕೆ ಇಂತಹದ್ದೇ ವಸ್ತು,ಸಾಮಗ್ರಿ ಬೇಕೆಂದು ಬೇಡಿಕೆ ಇರಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಆದರೆ ಸಮಾಜದಲ್ಲಿ ಎಲ್ಲರ ಮಧ್ಯೆ ನಡೆಯುವ ಸಾಧನೆಗಳ ಪುರಸ್ಕಾರದ ಸನ್ಮಾನಗಳಿಗೆ ಗೌರವ ಜಾಸ್ತಿ.ಅಸ್ಕಿ ಫೌಂಡೇಶನ್ ಸಹಜ ಸನ್ಮಾನದ ಮೂಲಕ ಸಾಧಕರ ಗೌರವವನ್ನು ಹೆಚ್ಚಿಸಿದೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ ಮಾತನಾಡಿ, ಸಿ.ಬಿ.ಅಸ್ಕಿಯವರದ್ದು ಮತ್ತೊಬ್ಬರ ಖುಷಿಯಲ್ಲಿ ಸಂತಸ ಕಾಣುವ ವ್ಯಕ್ತಿತ್ವ.ಎಲ್ಲರನ್ನು ಕರೆದು ಗೌರವಿಸುವ ಗುಣ ನಿಗರ್ವಿ ವ್ಯಕ್ತಿಯಾಗಿದ್ದಾರೆ ಎಂದರು.

ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಪ್ರೀತಿ, ಅಭಿಮಾನವೇ ಫೌಂಡೇಶನ್ ಬೆಳವಣಿಗೆಗೆ ಕಾರಣವಾಗಿದೆ.ಗಳಿಸಿದ್ದರಲ್ಲಿ ಅಲ್ಪವನ್ನು ಸಮಾಜ ಸೇವೆಗಾಗಿ ಮುಡಿಪಾಗಿಟ್ಟರೆ ಭವಿಷ್ಯದಲ್ಲಿ ಒಳ್ಳೆಯ ಕಾರ್ಯಗಳಿಗೆ ಸ್ಫೂರ್ತಿಯಾಗಲಿದೆ. ಕಷ್ಟದ ಸಮಯದಲ್ಲಿ ಅಸ್ಕಿ ಫೌಂಡೇಶನ್ ನೆರವಿಗೆ ಸದಾ ಸಿದ್ಧವಾಗಿದೆ ಎಂದರು.

ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಳೇಶ ಗಡೇದ ಮಾತನಾಡಿ, ಅಸ್ಕಿಯವರು ಸುಕನ್ಯಾ ಸಮೃದ್ಧಿ ಯೋಜನೆಯ ಆರಂಭಿಕ ಕಂತುಗಳನ್ನು ಕಟ್ಟುವುದಕ್ಕಾಗಿ ಹಲವು ವರ್ಷಗಳ ಹಿಂದೆ ಬಡ ಹೆಣ್ಣು ಮಕ್ಕಳಿಗೆ ಅನುಕೂಲ ಕಲ್ಪಿಸಿದ್ದಾರೆ.ಅಸ್ಕಿಯವರು ಸಹೃದಯವಂತರು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ, ಮುಖಂಡ ಉದಯ ರಾಯಚೂರ ಮಾತನಾಡಿದರು.ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಕಾರ್ಯಕ್ರಮದಲ್ಲಿದ್ದರು. ದೀಪರತ್ನಶ್ರೀ ಪ್ರಾರ್ಥಿಸಿದರು.ಶ್ರೀಶೈಲ ಹೂಗಾರ ನಿರೂಪಿಸಿದರು.
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ ಅವರನ್ನು ಫೌಂಡೇಶನ್‌ದಿAದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಪದಾಧಿಕಾರಿಗಳು,ಮನೆಯಲ್ಲಿ ಮಹಾಮನೆ, ಶರಣ ಸಾಹಿತ್ಯ ಪರಿಷತ್,ಕನ್ನಡ ಸಾಹಿತ್ಯ ಪರಿಷತ್, ಆನಂದಗೌಡ ಗೆಳೆಯರ ಬಳಗದ ಸದಸ್ಯರು ಪಾಲ್ಗೊಂಡಿದ್ದರು.

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ