Respect to SSLC students: Don't fall asleep and study when the exam comes - Kulkarni

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸನ್ಮಾನ:ಪರೀಕ್ಷೆ ಬಂದಾಗಲೇ ನಿದ್ದೆಗೆಟ್ಟು ಓದಬೇಡಿ- ಕುಲಕರ್ಣಿ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸನ್ಮಾನ:ಪರೀಕ್ಷೆ ಬಂದಾಗಲೇ ನಿದ್ದೆಗೆಟ್ಟು ಓದಬೇಡಿ- ಕುಲಕರ್ಣಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಪರೀಕ್ಷೆಗಳು ಬಂದಾಗಲೇ ನಿದ್ದೆಗೆಟ್ಟು ಹಗಲು ರಾತ್ರಿ ಎನ್ನದೇ ಓದಿದರೆ ನಿರೀಕ್ಷಿತ ಫಲಿತಾಂಶ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದಿರುವ ಆಕ್ಸಫರ್ಡ್ ಪಾಟೀಲ್ಸ್ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಕುಲಕರ್ಣಿ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿರುವ ಪ್ರತಿಭಾ ಕಿಡ್ಸ್ ಕಿಂಡರ್ ಗಾರ್ಟನ್ ಸ್ಕೂಲ್‌ನಲ್ಲಿ ಭಾನುವಾರ 2025ನೇ ಸಾಲಿನ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.

ನಿದ್ದೆಗೆಟ್ಟು ಓದಿದರೆ ಆರೋಗ್ಯದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಸ್ನೇಹಿತರೊಂದಿಗೆ ಅಂದಿನ ಪಾಠಗಳನ್ನು ಅಂದೇ ಓದಿ ಮನನ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದು ಎಂದರು.

ಪ್ರತಿಭಾ ಕಿಡ್ಸ್ ಕಿಂಡರ್ ಗಾರ್ಟನ್ ಸ್ಕೂಲ್‌ನ ಮುಖ್ಯಶಿಕ್ಷಕಿ ಅಕ್ಷತಾ ಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ರಜೆಯ ಸಮಯದಲ್ಲಿ ವಚನಗಳು, ಭಗವದ್ಗೀತೆ ಶ್ಲೋಕಗಳನ್ನು ಹೇಳಿಕೊಡಲಾಗಿದ್ದು ಮುಂಬರುವ ವಿದ್ಯಾಭ್ಯಾಸದ ಸಮಯದಲ್ಲಿ ಅವರ ಓದಿಗೆ ಸಹಕಾರಿಯಾಗಲಿವೆ ಎಂದರು.

ಸಂಸ್ಥೆಯ ಅಧ್ಯಕ್ಷೆ ನೀಲಮ್ಮ ಮಠ, ಸಂಸ್ಥಾಪಕ ಶಿವಕುಮಾರ ಮಠ, ಶಿಕ್ಷಕ ಬಿ.ಎಂ.ಕಡಿ, ಬಿ.ಎಸ್.ಬಿರಾದಾರ, ಶಿವಾನಂದ ಹೆಬ್ಬಾಳ, ಪಾಲಕರಾದ ಸಿ.ಜಿ.ಕುಲಕರ್ಣಿ ಮಾತನಾಡಿದರು. ಶಿಕ್ಷಕರಾದ ಸವಿತಾ ಪಾಟೀಲ, ಆರ್ಚನಾ ಮಠ ಇದ್ದರು. ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಾಸಂತಿ ಹಿರೇಮಠ, ಅನುಶ್ರೀ ಬಿರಾದಾರ, ಸಿಂಧೂ ಬಳವಾಟ, ಸಂಗೀತಾ ಹುಲಿಗೇರಿ, ಶ್ರೇಯಾ ಹೊನಕೇರಿ, ಸೇಜಲ ಮೇಟಿ ಅವರನ್ನು ಸನ್ಮಾನಿಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ