Revanasiddeswara Swamiji of Agatheertha blessed the Sangolli Rayanna Murti unveiling program held at Gonal SH village of Muddebihala taluk on Thursday

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Ad
Ad


ಮುದ್ದೇಬಿಹಾಳ : ಯುವಕರು ಗ್ರಾಮದಲ್ಲಿ ಬರೀ ಸಂಗೊಳ್ಳಿ ರಾಯಣ್ಣನ (Sangolli Rayanna) ಮೂರ್ತಿ ಇಟ್ಟು ಕಾರ್ಯಕ್ರಮ, ಜಯಂತಿ ಮಾಡದೇ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಸಿಡಿದೇಳುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರೂರು-ಅಗತೀರ್ಥ ಹಾಲುಮತ ಗುರುಪೀಠದ ಶಾಂತಮಯ ಸ್ವಾಮೀಜಿ ಹೇಳಿದರು.

Ad
Ad

ತಾಲ್ಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಗುರುವಾರದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ (Sangolli rayanna) ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Join Our Telegram: https://t.me/dcgkannada


ಯುವಕರು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಸಮಾಜದ ಒಳ್ಳೆಯ ಕೆಲಸದ ಜೊತೆಗೆ ಕೈಜೋಡಿಸಬೇಕು.ಮೂಢನಂಬಿಕೆಗಳಿಗೆ ಜೋತು ಬೀಳಬೇಡಿ ಎಂದರು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ ಮಾತನಾಡಿ, ರಾಯಣ್ಣನವರ ತ್ಯಾಗ ಬಲಿದಾನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದೆ.ಮೂರ್ತಿಗಳ ಪ್ರತಿಷ್ಠಾಪನೆಯ ಜೊತೆಗೆ ಅವರ ಧೈರ್ಯ,ಸಾಹಸದ ಗುಣಗಳು ಯುವಕರಲ್ಲಿ ಬರಬೇಕು ಎಂದರು.

ಇದನ್ನೂ ಓದಿ: Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಎಂ.ಎಚ್.ಹಾಲಣ್ಣವರ, ಡಾ. ಈರಗಂಟೆಪ್ಪ ತಳ್ಳೊಳ್ಳಿ,ಕೆ.ಆರ್. ಬಿರಾದಾರ ಅವರು ಮಾತನಾಡಿದರು.

ಡಾ.ಎಸ್.ಕೆ.ಹರನಾಳ ರಾಯಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಬಿಜೆಪಿ ಮುಖಂಡ ಮಲಕೇಂದ್ರಾಯಗೌಡ ಪಾಟೀಲ,ವಕೀಲ ಎಚ್.ವಾಯ್.ಪಾಟೀಲ, ಸಂಗಮೇಶ ಗುಂಡಕನಾಳ, ಬಸವರಾಜ ಗುಳಬಾಳ, ಹಣಮಂತ ಕುರಿ,ಶಾಂತಪ್ಪ ಕಂಬಳಿ, ಎಸ್.ಎ. ಬಿರಾದಾರ, ಬಸವರಾಜ ಬಿರಾದಾರ(ಬಂಗಾರಗುಂಡ), ರೇಣುಕಾ ನಾಗಾವಿ ಹಲವರು ಇದ್ದರು.

ಶ್ರೀಶೈಲ್ ಹೂಗಾರ ನಿರೂಪಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500