Road accident: Father and daughter died on the spot

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವಿನ್ನಪ್ಪಿದ ಘಟನೆ ಶನಿವಾರ ಬೆಳಿಗ್ಗೆ ಗ್ರಾಮದ ಕೆಇಬಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಭವಿಸಿದೆ.

ಎಸ್‌ಎನ್ ತಿಮ್ಮಾಪೂರ ಗ್ರಾಮದ ನಿವಾಸಿ ಬಸವರಾಜ ವಿಠಲ ಬಂಡಿವಡ್ಡರ (27) ಹಾಗೂ ಆತನ ಐದು ವರ್ಷದ ಮಗಳು ಸಂಜನಾ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತನ್ನ ಮೂರು ವರ್ಷದ ಮಗು ಹುಲಿಗೆಮ್ಮಳನ್ನು ಬೈಕ್ ಮುಂಬಾಗದಲ್ಲಿ ಕೂಡ್ರಿಸಿಕೊಂಡು ಹಳಗೇರಿ ಗ್ರಾಮದ ಹನಮಂತ ದೇವರ ದರ್ಶನಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಅಮರನಾಥ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ, ಮಾಂತೇಶ್ವರ್ ಜಿದ್ದಿ, ಡಿಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ, ಪಿಎಸ್‌ಐ ವಿಠಲ ನಾಯಿಕ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ದೇವರೆ ಈ ಸಾವು ನ್ಯಾಯವೇ: ದೇವರು ಇದ್ದಾನಾ…? ಅವನಿಗೆ ಕರುಣೆ ಇಲ್ಲವೇ…? ದೇವರು ಇರುವುದು ನೀಜವೇ…? ಇಂದು ನಡೆದ ಅಪಘಾತ ಸ್ಥಳದಲ್ಲಿ ಇಂತ ಪ್ರಶ್ನೇಗಳು ಸಹಜವಾಗಿ ಕೇಳಿಬಂದವು. ದೇವರ ದರ್ಶನಕ್ಕೆ ಹೊರಟವರಿಗೆ ಯಾಕೆ ಈ ಶಿಕ್ಷೆ…? ಏನೂ ಅರಿಯದ ಮೂರು ವರ್ಷದ ಈ ಪುಟ್ಟ ಕಂದಮ್ಮ ಮಾಡಿರುವ ತಪ್ಪಾದರೂ ಏನು…? ಕರುಣೆ ಬರಲಿಲ್ಲವೇ ಎಂದು ಹೆತ್ತವರ ಗೋಳಾಟ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂಬ್ಯೂಲೆನ್ಸ್ ವಾಹನಕ್ಕಾಗಿ ಪರದಾಟ: ಗ್ರಾಮದಲ್ಲಿ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಸವದತ್ತಿ-ಕೂಡಲಸಂಗಮ ರಾಜ್ಯ ಹೆದ್ದಾರಿ. ಹೀಗೆ ಇಕ್ಕಟ್ಟಾದ ಹೆದ್ದಾರಿಗಳಲ್ಲಿ ನಿತ್ಯ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗೊಂಡ ಜನರು ಅಂಬ್ಯೂಲೆನ್ಸ್ ಇಲ್ಲದೆ ಸಾವು ಬದುಕಿನ ಮದ್ಯ ಹೋರಾಡುವಂತಾಗಿದೆ.

ಸರಿಯಾದ ಸಮಯಕ್ಕೆ ಅಂಬ್ಯೂಲೆನ್ಸ್ ಬಾರದೆ ಅದೆಷ್ಟೋ ಪ್ರಾಣಪಕ್ಷಿ ಹಾರಿ ಹೋಗಿವೆ. ಸದ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಬೇಕೇ ಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಅಪಘಾತಗೊಂಡು ಒದ್ದಾಡುವ ಜೀವಗಳನ್ನ ಉಳಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ.

ಬಾದಾಮಿ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿಯವರು ಆದಷ್ಟು ಬೇಗ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ