Road accident: Father and daughter died on the spot

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವಿನ್ನಪ್ಪಿದ ಘಟನೆ ಶನಿವಾರ ಬೆಳಿಗ್ಗೆ ಗ್ರಾಮದ ಕೆಇಬಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಭವಿಸಿದೆ.

ಎಸ್‌ಎನ್ ತಿಮ್ಮಾಪೂರ ಗ್ರಾಮದ ನಿವಾಸಿ ಬಸವರಾಜ ವಿಠಲ ಬಂಡಿವಡ್ಡರ (27) ಹಾಗೂ ಆತನ ಐದು ವರ್ಷದ ಮಗಳು ಸಂಜನಾ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತನ್ನ ಮೂರು ವರ್ಷದ ಮಗು ಹುಲಿಗೆಮ್ಮಳನ್ನು ಬೈಕ್ ಮುಂಬಾಗದಲ್ಲಿ ಕೂಡ್ರಿಸಿಕೊಂಡು ಹಳಗೇರಿ ಗ್ರಾಮದ ಹನಮಂತ ದೇವರ ದರ್ಶನಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಅಮರನಾಥ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ, ಮಾಂತೇಶ್ವರ್ ಜಿದ್ದಿ, ಡಿಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ, ಪಿಎಸ್‌ಐ ವಿಠಲ ನಾಯಿಕ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ದೇವರೆ ಈ ಸಾವು ನ್ಯಾಯವೇ: ದೇವರು ಇದ್ದಾನಾ…? ಅವನಿಗೆ ಕರುಣೆ ಇಲ್ಲವೇ…? ದೇವರು ಇರುವುದು ನೀಜವೇ…? ಇಂದು ನಡೆದ ಅಪಘಾತ ಸ್ಥಳದಲ್ಲಿ ಇಂತ ಪ್ರಶ್ನೇಗಳು ಸಹಜವಾಗಿ ಕೇಳಿಬಂದವು. ದೇವರ ದರ್ಶನಕ್ಕೆ ಹೊರಟವರಿಗೆ ಯಾಕೆ ಈ ಶಿಕ್ಷೆ…? ಏನೂ ಅರಿಯದ ಮೂರು ವರ್ಷದ ಈ ಪುಟ್ಟ ಕಂದಮ್ಮ ಮಾಡಿರುವ ತಪ್ಪಾದರೂ ಏನು…? ಕರುಣೆ ಬರಲಿಲ್ಲವೇ ಎಂದು ಹೆತ್ತವರ ಗೋಳಾಟ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂಬ್ಯೂಲೆನ್ಸ್ ವಾಹನಕ್ಕಾಗಿ ಪರದಾಟ: ಗ್ರಾಮದಲ್ಲಿ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಸವದತ್ತಿ-ಕೂಡಲಸಂಗಮ ರಾಜ್ಯ ಹೆದ್ದಾರಿ. ಹೀಗೆ ಇಕ್ಕಟ್ಟಾದ ಹೆದ್ದಾರಿಗಳಲ್ಲಿ ನಿತ್ಯ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗೊಂಡ ಜನರು ಅಂಬ್ಯೂಲೆನ್ಸ್ ಇಲ್ಲದೆ ಸಾವು ಬದುಕಿನ ಮದ್ಯ ಹೋರಾಡುವಂತಾಗಿದೆ.

ಸರಿಯಾದ ಸಮಯಕ್ಕೆ ಅಂಬ್ಯೂಲೆನ್ಸ್ ಬಾರದೆ ಅದೆಷ್ಟೋ ಪ್ರಾಣಪಕ್ಷಿ ಹಾರಿ ಹೋಗಿವೆ. ಸದ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಬೇಕೇ ಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಅಪಘಾತಗೊಂಡು ಒದ್ದಾಡುವ ಜೀವಗಳನ್ನ ಉಳಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ.

ಬಾದಾಮಿ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿಯವರು ಆದಷ್ಟು ಬೇಗ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬ್ಯೂಲೆನ್ಸ್ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ