Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ಕೋಳೂರು ತಾಂಡಾದ ಅನಿಲ್

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಧಾರವಾಡ, ಜೂ.14: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್‌ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ವೀಕ್ಷಣೆ ಮಾಡಿದರು. ರಸ್ತೆ, ಸೇತುವೆ ಹಾಗೂ ಇತರ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ,