Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು