Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು