Road work incomplete: Opposition to toll collection

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿಗೆ ಕೆ.ಆರ್.ಡಿ.ಎಲ್ ಅಧೀಕ್ಷಕ ಎಂಜೀನಿಯರ್‌ಗೆ ಮನವಿ ಪತ್ರ ನೀಡಿರುವ ಅವರು, ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ರಸ್ತೆಯ ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ಕೆಲವು ನಿವಾಸಿಗಳು ಜೀವನ ನಡೆಸುತ್ತಿದ್ದರು. ಸದರಿ ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತಿದ್ದು ಈ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ ಎಂಬ ಮಾಹಿತಿ ಇದೆ. ಹೀಗಿದ್ದರೂ ಕೂಡಾ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೇ ಹಾಗೆಯೇ ಬಿಡಲಾಗಿದ್ದು ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಅವುಗಳು ಕೂಡಾ ಮಳೆ ನೀರು ತುಂಬಿ ಚರಂಡಿಯ ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಹಲವಾರು ರೋಗ ರುಜಿನಗಳಿಗೆ ಆಸ್ಪದ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹಿಂದೆಯೇ ತಮ್ಮ ಕೇಂದ್ರ ಕಛೇರಿಗೆ ಬಂದು ಮನವಿ ಸಲ್ಲಿಸಿದರೂ ಕೂಡಾ,ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ. ಅಪೂರ್ಣಗೊಂಡಿರುವ ರಸ್ತೆಯ ಸದರಿ ಜಾಗದಲ್ಲಿ ರಸ್ತೆ ಅತ್ಯಂತ ಕಿರಿಯದಾಗಿರುವುದರಿಂದ ಈ ರಸ್ತೆಯ ಮುಖಾಂತರ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆ ಪೂರ್ಣಗೊಳ್ಳುವವರೆಗೂ ಟೋಲ್ ಸುಂಕ ವಸೂಲಾತಿ ಮಾಡುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ.

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿದರೂ ಇಲ್ಲಿಯ ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸುವುದಲ್ಲದೇ ಎರಡು ವಾರದಲ್ಲಿ ಪರಿಹಾರ ಪಡೆದ ಸದರಿ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸದರಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ ದಲಿತ ಪರ ಪ್ರಗತಿಪರ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ