ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ