ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.