ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ