ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ