Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ





ಮಂಡ್ಯ: ಇಂದು ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ (Rowdy sheeter) ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಡಕ್ಕ ಅಲಿಯಾಸ್ ಮುತ್ತುರಾಜ್‌ನ ಮೇಲೆ ಹಲಗೂರು ಠಾಣಾ ಸಿಪಿವೈ ಶ್ರೀಧರ್ ಫೈರಿಂಗ್ ಮಾಡಿದ್ದಾರೆ.

ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿವೈ ಶ್ರೀಧ‌ರ್ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದರು.

Join Our Telegram: https://t.me/dcgkannada

ಕಾಂತರಾಜು ಕೊಲೆಗೆ ಮುತ್ತುರಾಜ ಅಲಿಯಾಸ್ ಡಕ್ಕ ಎಂಬಾತನಿಂದ ಸುಫಾರಿ ಬಗ್ಗೆ ಆರೋಪಿಗಳು ತನಿಖೆ ವೇಳೆ ಬಾಯ್ದಿಟ್ಟಿದ್ದರು. ಈತ ಡಕ್ಕ ಚಿಕ್ಕಮಲಗೂಡು ಬಳಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಡಕ್ಕ ಬೈಕ್ ನಲ್ಲಿ ಹೋಗುತ್ತಿರುವಾಗ ಆರೋಪಿಯನ್ನ ಹಿಡಿಯಲು ಸಿಪಿಐ ಶ್ರೀಧರ್ ಅಂಡ್ ಟೀಂ ಮುಂದಾಗಿತ್ತು. ಈ ವೇಳೆ ಬೈಕ್ ಬೀಳಿಸಿ ಡಕ್ಕ (Rowdy sheeter) ಓಡಲು ಮುಂದಾಗಿದ್ದ ಈ ವೇಳೆ ಹಿಡಿಯಲು ಮುಂದಾದ ಪೇದೆ ಮೇಲೆ ಡ್ರಾಗನ್ ನಿಂದ ಹಲ್ಲೆ ನಡೆಸಿದ್ದ ಆರೋಪಿ ಡಕ್ಕ ಏರ್ ಫೈರ್ ವಾರ್ನಿಂಗ್ ಬಗ್ಗಲಿಲ್ಲ. ಕೊನೆಗೆ ತಮ್ಮ ಆತ್ಮರಕ್ಷಣೆಗಾಗಿ ಸಿಪಿವೈ ಶ್ರೀಧರ್ ರಿಂದ ಫೈರಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಡಕ್ಕನ ಬಲಗಾಲಿಗೆ ಗುಂಡೇಟು ತಗುಲಿದೆ. ಮುತ್ತುರಾಜ್ ಅಲಿಯಾಸ್ ಡಕ್ಕ 11 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. 3 ಕೊಲೆ, 3 ಕೊಲೆಗೆ ಯತ್ನ 2 ರಾಬರಿ ಪ್ರಕರಣ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ