Running of Mahebuba Nagar-Bidarkundi Nagar Transport

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ನಗರದಲ್ಲಿ ಎರಡನೇ ಹಂತದ ಸಿಟಿ ಬಸ್ ಸಂಚಾರ ಗುರುವಾರದಿಂದ ಆರಂಭಿಸಲಾಯಿತು.

ಪಟ್ಟಣದ ಮಹೆಬೂಬ ನಗರದ ಉರ್ದು ಶಾಲೆಯ ಮುಂಭಾಗದಲ್ಲಿ ರಿಬ್ಬನ್ ಕತ್ತರಿಸಿ ನಗರ ಸಾರಿಗೆಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಚಾಲನೆ ನೀಡಿದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ನಗರದ ಜನತೆಗೆ ಸಿಟಿ ಬಸ್‌ಗಳು ಒಳ್ಳೆಯ ಅನುಕೂಲತೆ ಕಲ್ಪಿಸಿದ್ದು ಖಾಸಗಿಯವರಿಗಿಂತ ಹೆಚ್ಚು ಉಪಯುಕ್ತವಾಗಿವೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ಕೆಯುಸಿ ಬ್ಯಾಂಕ್ ನಿರ್ದೇಶಕ ಶ್ರೀಶೈಲ ಪೂಜಾರಿ, ಗ್ಯಾರಂಟಿ ಸಮಿತಿ ಸದಸ್ಯ ಸಂಗಣ್ಣ ಮೇಲಿನಮನಿ, ಅಲ್ಲಾಭಕ್ಷ್ಯ ಟಕ್ಕಳಕಿ, ಸಾಹೇಬಲಾಲ ದೇಸಾಯಿ, ಹುಸೇನ ಮುಲ್ಲಾ, ಗೋಪಿ ಮಡಿವಾಳರ, ಹುಸೇನಭಾಷಾ ಹುಣಸಗಿ, ಜಬ್ಬಾರ ಗೋಲಂದಾಜ, ರೋಷನ ಬೇಗ್, ಚಾಲಕ ಶೆಟ್ಟೆಪ್ಪ ಕಡಿ, ಕಂಟ್ರೋಲರ್ ಹಬೀಬ ಹಡಗಲಿ, ನಿರ್ವಾಹಕ ಅಮೋಘಸಿದ್ದ ಹಾದಿಮನಿ ಇದ್ದರು.

ಬಸ್ ಸಮಯ: ಬೆಳಗ್ಗೆ 7 ಗಂಟೆಯಿಂದ ನಾಲತವಾಡ ರಸ್ತೆಯ ಉರ್ದು ಶಾಲೆಯಿಂದ ಆರಂಭಗೊಳ್ಳುವ ನಗರ ಸಾರಿಗೆ ಸಂಚಾರ ಅರ್ಧಗಂಟೆಗೊಮ್ಮೆ ಬಿದರಕುಂದಿ ಗ್ರಾಮದವರೆಗಿನ ಕ್ರಾಸ್‌ವರೆಗೂ ಸಂಚರಿಸಲಿದೆ ಎಂದು ಸಾರಿಗೆ ಘಟಕದ ಮೂಲಗಳು ತಿಳಿಸಿವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ