Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ