Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

Ad
Ad

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ