Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ