Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ