Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600