Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು