Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ