Sangappa Mante, a freedom fighter neglected by the government

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

ದೇಶಕ್ಕೆ ಹೆಸರಿಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಂತಾಗಿದೆ. ಎಲ್ಲೆಂದರಲ್ಲಿ ನಾವೇ ಎನ್ನುವ ಟಿವಿಯ ಮಾತು. ಹಣ ಕೊಟ್ಟರೆ ಅಧಿಕಾರಿಗಳಿಂದ ಕೆಲಸ ಸಾಧ್ಯ. ಇವೆಲ್ಲ ನನಗೆ ಬೇಡ ಎಂದು ನಾನು ನನ್ನ ವೃತ್ತಿಯಲ್ಲಿದ್ದೇನೆ ಎನ್ನುವ ಸಂಗಪ್ಪ ಮಂಟೆ ಅವರು ನೊಂದುಕೊಂಡು ಬದುಕು ಕಟ್ಟಿಕೊಂಡಿದ್ದು ಇಂದಿಗೂ ಇಳಿ ವಯಸ್ಸಿನಲ್ಲಿ ಜಗ್ಗದೇ ನೇಕಾರಿಕೆ ಮಾಡುತ್ತಿದ್ದುದು ಅಚ್ಚರಿ ಮೂಡಿಸಿದೆ.

ಆಸರೆ ಇಲ್ಲ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಮಂಟೆ ಅವರು ಸುಮಾರು 15 ವರ್ಷದವರಿದ್ದಾಗಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಂಡಿದ್ದರು. ಮಂಟೆ ನೇರ ದಿಟ್ಟ ನಿರಂತರದ ವ್ಯಕ್ತಿತ್ವದವರು. ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ಬಿಟ್ಟವರಲ್ಲಿ ನಮ್ಮ ಭಾಗದಲ್ಲಿ ಅಂದಿನ ಗುಲಬರ್ಗಾ ಜೈಲಲ್ಲಿ 3 ತಿಂಗಳ ಕಾಲ ಕಳೆದಿದ್ದಾರೆ. ಬ್ರೀಟಿಷರು ಸಿಕ್ಕ ಸಿಕ್ಕವರ ಮನೆ ಮನೆಗಳಲ್ಲಿ ಹೊಕ್ಕು ಆಸ್ತಿ ಪಾಸ್ತಿ ಲೂಟಿ ಮಾಡಿದ್ದಲ್ಲದೇ ನಮ್ಮನ್ನು ಕಂಡು ಓಡಿ ಹೋದ ‘ರಜಾಕರು’ ಕ್ರೂರತನ ಮೆರೆದು ನಮ್ಮನ್ನು ಗುಲಾಮಗಿರಿ ಮಾಡಿಕೊಂಡಿದ್ದರು ಎನ್ನುತ್ತಾರೆ. ಆದರೂ ನಾ ಜಗ್ಗದೇ ಸುರುಪುರ ರಾಜಾ ವೆಂಕಟಪ್ಪ ನಾಯಕತ್ವದಲ್ಲಿ ಹೋರಾಡಿದ್ದು ನಿಜಕ್ಕೂ ಎದೆಗಾರಿಕೆಗೆ ಯಾವುದೂ ಸಾಟಿ ಇಲ್ಲದಂತೆ ಕತೆ ಬಿಚ್ಚಿಟ್ಟಿದ್ದಾರೆ.

ಕಾಗದ ಹಿಡಿದು ಅಲೆದಾಡಿದ್ದರು: ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯವರನ್ನು ಭೇಟಿ ಮಾಡಿದ್ದ ಮಂಟೆ ಅವರು ಈಗಿನ ಅಧಿಕಾರಿಗಳು ರಾಜಕೀಯ ನಾಯಕರು ಅವರ ಮಾತುಗಳೇ ಬಂಡವಾಳ, ಯಾವದೇ ಸರಕಾರ ಅಥವಾ ಪಕ್ಷ ಒಳ್ಳೆಯದ್ದೇ ಇರುತ್ತೆ ಆದರೆ ಆಡಳಿತ ನಡೆಸೋರೇ ಭ್ರಷ್ಟರು, ಸ್ವತಂತ್ರ ಸಿಕ್ಕ ನಂತರ ಸೌಲಭ್ಯಗಳು ಸಿಗಬಹುದು ಎಂದು ದಾಖಲೆಗಳನ್ನು ಹಿಡಿದು ಅಲೆದಾಡಿದೆ. ಎಲ್ಲೆ ಹೋದರೂ ಲಂಚವೇ ಕೇಳಿ ಬಂದಿತು. ಈಗ ಮಾಸಿಕ 10 ಸಾವಿರ ಹೊರತು ಈವರೆಗೂ ಆಸರೆ ಮನೆ ಅಥವಾ ನನ್ನ ಕಾಯಕದ ನೇಕಾರಿಕೆಗೆ ಸಂಬಂಧಿಸಿದ ಯಾವದೇ ಸೌಲಭ್ಯ ಕೊಡಲು ಭ್ರಷ್ಟ ಅಧಿಕಾರಿಗಳು ಮುಂದೆ ಬರಲಿಲ್ಲ. ಒಂದು ಮನೆ ಕೇಳಿದರೆ 20 ಸಾವಿರ ಕೇಳುತ್ತಾರೆ ಯಾಕೆ ಹಣ ಕೊಡಬೇಕು ಎನ್ನುತ್ತಾರೆ ಹೋರಾಟಗಾರ ಸಂಗಪ್ಪ ಮಂಟೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ