ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.

ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ ವಿಶೇಷತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದೆ.ರೈತರು ಇಡೀ ಜಗತ್ತಿಗೆ ಅನ್ನ ಹಾಕುವ ದೇವರು.ಅವರನ್ನು ನೆನೆಸಿಕೊಳ್ಳುವ ಜೊತೆಗೆ ಸಂಕ್ರಮಣದ ಆಚರಣೆಯ ಕುರಿತು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿವಳಿಕೆ ನೀಡುತ್ತಿದ್ದೇವೆ ಎಂದರು.

ಮಕ್ಕಳಿoದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ವೇಷಭೂಷಣ ಸ್ಪರ್ಧೆಗಳು ನಡೆದವು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂಗಮ್ಮ ಹಿರೇಮಠ, ರೂಪಾ ಬಿರಾದಾರ,ತಬಸ್ಸುಮ ನಾಯ್ಕೋಡಿ, ಬಿ.ಪಿ.ಕೊಪ್ಪದ, ಶೋಭಾ ಹಿರೇಮಠ, ಐಶ್ವರ್ಯಾ ಸೀತಿಮನಿ, ಅರ್ಚನಾ ಮಾಲಗತ್ತಿ, ನಂದಿನಿ ಬಿಜ್ಜೂರ, ಸಿದ್ದಮ್ಮ ಸೋಮನಾಳ, ಶರಣಮ್ಮ ಕೋತಿ, ವೇದವತಿ ದೇವರೆಡ್ಡಿ, ಆರ್.ಪಿ.ಸಂಗಮ, ವಿದ್ಯಾರಾಣಿ ಗುರುಮಿ,ಸವಿತಾ ಮಠ, ಉಮಾ ಮಹೇಂದ್ರಕರ, ನೀಲಮ್ಮ ಹಿರೇಮಠ, ರಾಜೇಶ್ವರಿ, ರತ್ನಾ ಹಿರೇಮಠ, ಶಿವಲೀಲಾ ಬಿರಾದಾರ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು