ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.

ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ ವಿಶೇಷತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದೆ.ರೈತರು ಇಡೀ ಜಗತ್ತಿಗೆ ಅನ್ನ ಹಾಕುವ ದೇವರು.ಅವರನ್ನು ನೆನೆಸಿಕೊಳ್ಳುವ ಜೊತೆಗೆ ಸಂಕ್ರಮಣದ ಆಚರಣೆಯ ಕುರಿತು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿವಳಿಕೆ ನೀಡುತ್ತಿದ್ದೇವೆ ಎಂದರು.

ಮಕ್ಕಳಿoದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ವೇಷಭೂಷಣ ಸ್ಪರ್ಧೆಗಳು ನಡೆದವು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂಗಮ್ಮ ಹಿರೇಮಠ, ರೂಪಾ ಬಿರಾದಾರ,ತಬಸ್ಸುಮ ನಾಯ್ಕೋಡಿ, ಬಿ.ಪಿ.ಕೊಪ್ಪದ, ಶೋಭಾ ಹಿರೇಮಠ, ಐಶ್ವರ್ಯಾ ಸೀತಿಮನಿ, ಅರ್ಚನಾ ಮಾಲಗತ್ತಿ, ನಂದಿನಿ ಬಿಜ್ಜೂರ, ಸಿದ್ದಮ್ಮ ಸೋಮನಾಳ, ಶರಣಮ್ಮ ಕೋತಿ, ವೇದವತಿ ದೇವರೆಡ್ಡಿ, ಆರ್.ಪಿ.ಸಂಗಮ, ವಿದ್ಯಾರಾಣಿ ಗುರುಮಿ,ಸವಿತಾ ಮಠ, ಉಮಾ ಮಹೇಂದ್ರಕರ, ನೀಲಮ್ಮ ಹಿರೇಮಠ, ರಾಜೇಶ್ವರಿ, ರತ್ನಾ ಹಿರೇಮಠ, ಶಿವಲೀಲಾ ಬಿರಾದಾರ ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು