ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.

ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ ವಿಶೇಷತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದೆ.ರೈತರು ಇಡೀ ಜಗತ್ತಿಗೆ ಅನ್ನ ಹಾಕುವ ದೇವರು.ಅವರನ್ನು ನೆನೆಸಿಕೊಳ್ಳುವ ಜೊತೆಗೆ ಸಂಕ್ರಮಣದ ಆಚರಣೆಯ ಕುರಿತು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿವಳಿಕೆ ನೀಡುತ್ತಿದ್ದೇವೆ ಎಂದರು.

ಮಕ್ಕಳಿoದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ವೇಷಭೂಷಣ ಸ್ಪರ್ಧೆಗಳು ನಡೆದವು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂಗಮ್ಮ ಹಿರೇಮಠ, ರೂಪಾ ಬಿರಾದಾರ,ತಬಸ್ಸುಮ ನಾಯ್ಕೋಡಿ, ಬಿ.ಪಿ.ಕೊಪ್ಪದ, ಶೋಭಾ ಹಿರೇಮಠ, ಐಶ್ವರ್ಯಾ ಸೀತಿಮನಿ, ಅರ್ಚನಾ ಮಾಲಗತ್ತಿ, ನಂದಿನಿ ಬಿಜ್ಜೂರ, ಸಿದ್ದಮ್ಮ ಸೋಮನಾಳ, ಶರಣಮ್ಮ ಕೋತಿ, ವೇದವತಿ ದೇವರೆಡ್ಡಿ, ಆರ್.ಪಿ.ಸಂಗಮ, ವಿದ್ಯಾರಾಣಿ ಗುರುಮಿ,ಸವಿತಾ ಮಠ, ಉಮಾ ಮಹೇಂದ್ರಕರ, ನೀಲಮ್ಮ ಹಿರೇಮಠ, ರಾಜೇಶ್ವರಿ, ರತ್ನಾ ಹಿರೇಮಠ, ಶಿವಲೀಲಾ ಬಿರಾದಾರ ಇದ್ದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ